ತಾಲ್ಲೂಕುಹೊಸನಗರ

ಇತಿಹಾಸ ಪ್ರಸಿದ್ಧ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನ ಸಮಿತಿಯ ನೂತನ ಅಧ್ಯಕ್ಷರಾಗಿ ನಾಡಗಂಟಿ ಚಂದ್ರಶೇಖರ್

ಹೊಸನಗರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನ ಸಮಿತಿ ನೂತನ ಅಧ್ಯಕ್ಷರಾಗಿ ನಾಡಗಂಟಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ದೇವಸ್ಥಾನದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ನಾಡಗಂಟಿ ಚಂದ್ರಶೇಖರ್ ನೂತನವಾಗಿ ಅಧ್ಯಕ್ಷ ಸ್ಥಾನದ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಸಮಿತಿಯ ಗೌರವಾಧ್ಯಕ್ಷರಾಗಿ ಬಹಳ ಹಿಂದಿನಿಂದಲೂ ದೇಗುಲದ ಸೇವೆ ಮತ್ತು ಅಭಿವೃದ್ಧಿಯಲ್ಲಿ ಒತ್ತು ನೀಡಿದ್ದ ಕೃಷ್ಣಮೂರ್ತಿ ಬಾಯಾರ್ ಆಯ್ಕೆಯಾಗಿದ್ದಾರೆ.
ಉಳಿದಂತೆ ಉಪಾಧ್ಯಕ್ಷರಾಗಿ ಮಂಜುನಾಥ ಶೆಟ್ಟಿ, ಕೋಶಾಧಿಕಾರಿಯಾಗಿ ದಿವಾಕರ ಮಂಜರು, ಪ್ರ.ಕಾರ್ಯದರ್ಶಿಯಾಗಿ ರಮೇಶ್, ಕಾರ್ಯದರ್ಶಿಯಾಗಿ ಶ್ರೀಕಾಂತ ಪಂಡಿತ್ ಆಯ್ಕೆಯಾಗಿದ್ದಾರೆ.

ಕ್ರಿಯಾಶೀಲ ವ್ಯಕ್ತಿಗಳ ಸಂಗಮದೊಂದಿಗೆ ಉತ್ತಮ ಸಮಿತಿ ರಚನೆಯಾಗಿದ್ದು ದೇಗುಲದ ಸರ್ವಾಂಗೀಣ ಅಭಿವೃದ್ಧಿಗೆ ಆಧ್ಯತೆ ನೀಡಲಾಗುವುದು ಎಂದು ನೂತನ ಅಧ್ಯಕ್ಷ ನಾಡಗಂಟಿ ಚಂದ್ರಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು ಗುಂಡಿ ತೋಡಿದ ನಿಧಿ ಚೋರರು

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು…

1 of 42

Leave A Reply

Your email address will not be published. Required fields are marked *