ಶಿವಮೊಗ್ಗತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿಶಿಕಾರಿಪುರಶಿರಾಳಕೊಪ್ಪ

ಬ್ರಹ್ಮೇಶ್ವರ ರಸ್ತೆಯ ನೂತನ ಸೇತುವೆ ಕಾಮಗಾರಿ | ಸಂಸದ ಬಿವೈಆರ್ ಶಾಸಕ ಬೇಳೂರು ಶಂಕುಸ್ಥಾಪನೆ

  • ಬ್ರಹ್ಮೇಶ್ವರ ರಸ್ತೆಯ ನೂತನ ಸೇತುವೆ ಕಾಮಗಾರಿ | ಸಂಸದ ಬಿವೈಆರ್ ಶಾಸಕ ಬೇಳೂರು ಶಂಕುಸ್ಥಾಪನೆ

ಹೊಸನಗರ: ತಾಲೂಕಿನ ಬಾಳೆಹಳ್ಳಿಯಿಂದ ಎಸ್ ಹೆಚ್ 77 – ಬ್ರಹ್ಮೇಶ್ವರ ರಸ್ತೆಯ ನೂತನ ಸೇತುವೆ ಕಾಮಗಾರಿಯನ್ನು ಸಂಸದ ಬಿ.ವೈ.ರಾಘವೇಂದ್ರ, ಸಾಗರ ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ನೆರವೇರಿಸಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಿಂದ ರೂ.319.46 ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕ್ಷೇತ್ರದ ಕಟ್ಟಕಡೆ ಗ್ರಾಮಗಳಿಗೆ ರಸ್ತೆ ನಿರ್ಮಾಣ ಮಾಡುವಲ್ಲಿ ಕೇಂದ್ರದ ಗ್ರಾಮ ಸಡಕ್ ಯೋಜನೆ ಮಹತ್ವದ್ದಾಗಿದೆ. ಈ ಸಂದರ್ಭದಲ್ಲಿ ಹಿಂದೆ ಪ್ರಧಾನಮಂತ್ರಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ನೆನಪಾಗುತ್ತಾರೆ ಎಂದರು.

ಸಂಸದರಿಗೆ ಚಪ್ಪಾಳೆ ಕೊಡಿ: ಬೇಳೂರು
ಸಾಗರ ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಈ ಭಾಗಕ್ಕೆ ರಸ್ತೆ ಕಾಮಗಾರಿಗೆ ಅನುದಾನ ತಂದಿದ್ದಾರೆ ಅವರಿಗೆ ಒಂದು ಚಪ್ಪಾಳೆ ಕೊಡಿ ಎಂದು ಗಮನ ಸೆಳೆದರು.

ರಾಜಕಾರಣ ಬೇರೆ ಅಭಿವೃದ್ಧಿ ಬೇರೆ ಈ ಕಾಮಗಾರಿ ಉದ್ಘಾಟನೆ ಸಂದರ್ಭದಲ್ಲಿ ನಾನೇ ಸಂಸದರ ಡೇಟ್ ತೆಗೆದುಕೊಳ್ಳಿ. ಅಂದೇ ನಾನು ಬರುತ್ತೇನೆ ಎಂದಿದ್ದೆ ಎಂದರು.

ಗ್ಯಾರಂಟಿ ಯೋಜನೆಯಲ್ಲಿ ಅಲ್ಪಸ್ವಲ್ಪ ವ್ಯತ್ಯಯ ಆಗಿರಬಹುದು ಆದರೆ ಶೇ.90 ರಷ್ಟು ಬಡವರ, ಮಧ್ಯಮವರ್ಗದವರಿಗೆ ತಲುಪಿದೆ ಎಂದರು.

ಶಾಸಕರಾದ ಆರಗ ಜ್ಞಾನೇಂದ್ರ, ಗ್ರಾಮಪಂಚಾಯ್ತಿ ಮಾಲತಿ, ಕಲಗೋಡು ರತ್ನಾಕರ್, ಬಿ.ಯುವರಾಜ್, ಎರಗಿ ಉಮೇಶ್, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಕರುಣಾಕರ, ಎರಗಿ ಗಣೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಜನಪ್ರತಿನಿಧಿಗಳು, ಗ್ರಾಪಂ ಸದಸ್ಯರು ಇದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *