
HOSANAGARA| ಮಳೆ ಹಾನಿ ಸಂತ್ರಸ್ಥರ ಕುಟುಂಬಕ್ಕೆ ಶಾಸಕರ ಪರ ಆರ್ಥಿಕ ನೆರವು: ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು
ಹೊಸನಗರ: ತಾಲೂಕಿನಲ್ಲಿ ಸುರಿಯುತ್ತಿರುವ ಬಾರೀ ಮಳೆಗೆ ವ್ಯಾಪಕ ಹಾನಿಯಾಗಿದೆ. ಬಡವರು ರಾತ್ರಿ ಬೆಳಗಾಗುವುದರೊಳಗೆ ನಿರ್ಗತಿಕರಾಗಿದ್ದಾರೆ. ಬಡ ಸಂತ್ರಸ್ಥರನ್ನು ಗುರುತಿಸಿ ನೈತಿಕ ಸ್ಥೈರ್ಯ ನೀಡುವ ಸಲುವಾಗಿ ಶಾಸಕರ ಪರ ಆರ್ಥಿಕ ಸಹಕಾರ ನೀಡಲಾಗುತ್ತಿದೆ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ತಿಳಿಸಿದ್ದಾರೆ.
ಬಾಳೂರು ಗ್ರಾಪಂ ವ್ಯಾಪ್ತಿಯ ವಡಗೆರೆ ಶಾಲೆ ಸಮೀಪದ ಚೆಂದಾಳದಿಂಬ ಗ್ರಾಮದ ಅಮರ್ ಸಿಂಗ್ ಮನೆ ಸಂಪೂರ್ಣ ಕುಸಿತ ಕಂಡಿದೆ. ಶಾಸಕರ ಸೂಚನೆ ಮೇರೆಗೆ ಘಟನಾ ಸ್ಥಳಕ್ಕೆ ತೆರಳಿ ಆರ್ಥಿಕ ಸಹಕಾರ ನೀಡಿ ಸಾಂತ್ವನ ಹೇಳಲಾಗಿದೆ ಎಂದರು.


ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸ ಕೆಸರೆ ಗ್ರಾಮದ ಹೆಗ್ಗೆಬೈಲು ವೇದಾವತಿ ಅವರ ಮನೆ ಬಾರಿ ಮಳೆಯಿಂದಾಗಿ ಹಾನಿಗೆ ತುತ್ತಾಗಿತ್ತು. ಸ್ಥಳಕ್ಕೆ ಬೇಟಿ ನೀಡಿ ಹೆಗ್ಗೆಬೈಲು ವೇದಾವತಿ ಕುಟುಂಬದವರಿಗೆ ಸಾಂತ್ವನ ಹೇಳಿ ಶಾಸಕರ ಪರವಾಗಿ ಆರ್ಥಿಕ ನೆರವು ನೀಡಲಾಯಿತು ಎಂದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಅಧ್ಯಕ್ಷ ಚಿದಂಬರ್ ಮಾರುತಿಪುರ, ಗ್ರಾಮ ಪಂಚಾಯತ್ ಸದಸ್ಯ ಇಂದ್ರೇಶ್ , ಪಿಡಿಒ ಜಾನ್ ಡಿಸೋಜ, ಸುದೀಪ್ ಬಿ.ಸಿ, ಚೇತನ್ ದಾಸ್ ಹೊಸಮನೆ ಇನ್ನಿತರರು ಉಪಸ್ಥಿತರಿದ್ದರು.
