Homeತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿಶಿವಮೊಗ್ಗಶಿವಮೊಗ್ಗ ಜಿಲ್ಲೆ

ತುಂಬಿದ ಸಾವೇಹಕ್ಲು ಜಲಾಶಯ | ಅವಳಿ‌ ಜಲಾಶಯಗಳಿಗೆ ತಾಲೂಕು‌ ದಂಡಾಧಿಕಾರಿ ಬಾಗಿನ ಸಮರ್ಪಣೆ | ಓರ್ವ ಹೆಣ್ಣಾಗಿ ಇದು ಧನ್ಯತೆಯ ಕ್ಷಣ ಎಂದ ತಹಶೀಲ್ದಾರ್ ರಶ್ಮೀ ಹಾಲೇಶ್

ತುಂಬಿದ ಸಾವೇಹಕ್ಲು ಜಲಾಶಯ | ಅವಳಿ‌ ಜಲಾಶಯಗಳಿಗೆ ತಾಲೂಕು‌ ದಂಡಾಧಿಕಾರಿ ಬಾಗಿನ ಸಮರ್ಪಣೆ | ಓರ್ವ ಹೆಣ್ಣಾಗಿ ಇದು ಧನ್ಯತೆಯ ಕ್ಷಣ ಎಂದ ತಹಶೀಲ್ದಾರ್ ರಶ್ಮೀ ಹಾಲೇಶ್

ಹೊಸನಗರ: ತಾಲೂಕಿನ ಚಕ್ರಾ ಜಲಾಶಯ ತುಂಬಿ ಓವರ್ ಫ್ಲೋ ಆದ ಬೆನ್ನಲ್ಲೆ, ಸಾವೇಹಕ್ಲು ಜಲಾಶಯ ಕೂಡ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದೆ. ಈ ನಡುವೆ ಅವಳಿ ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ತಾಲೂಕು ಆಡಳಿತ, ನೌಕರರ ಪರವಾಗಿ ಬಾಗಿನ ಸಮರ್ಪಿಸಿದ್ದಾರೆ.

ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು.

ಮನವಿ

ನಾಡಿನ ಬೆಳಕಿಗಾಗಿ ಸುಧೀರ್ಘ ಸೇವೆ ಗೈದಿರುವ ಎರಡು ಜಲಾಶಯಗಳಿಗೆ ಬಾಗಿನ ಸಲ್ಲಿಸುವ ಅವಕಾಶ ಓರ್ವ ಹೆಣ್ಣಾಗಿ ಸಿಕ್ಕಿರುವುದಕ್ಕೆ ಧನ್ಯತೆ ಸಿಕ್ಕಿದೆ. ಇದೊಂದು ಅಪೂರ್ಣ ತಾಣ. ಬಹುತೇಕ ಮಹಿಳೆಯರು ಇದರಲ್ಲಿ ಭಾಗವಹಿಸಿದ್ದು ಬಾಗಿನ ಸಂಭ್ರಮಕ್ಕೆ ನೀಡಿತು ಎಂದರು.

ಈ ಸಂದರ್ಭದಲ್ಲಿ ಕೊಡಚಾದ್ರಿ ಪದವಿ ಕಾಲೇಜು ಸಮಿತಿ ಉಪಾಧ್ಯಕ್ಷವಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಅವಳಿ ಜಲಾಶಯ ವೀಕ್ಷಣೆಗೆ ಸ್ಥಳೀಯ ಮಟ್ಟದಲ್ಲೇ ಪಾಸ್ ನೀಡಬೇಕು ಮತ್ತು ಪ್ರವಾಸೋಧ್ಯಮ ಅಭಿವೃದ್ಧಿಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಮನವಿ ಮಾಡಿದರು.

ಕೆಪಿಸಿ ಸಹಾಯಕ ಎಂಜನಿಯರ್ (ಗೇಟ್) ವಿನಯಕುಮಾರ ಕೆ, ಅವಳಿ ಡ್ಯಾಂ ವೀಕ್ಷಣೆಗೆ ಸಂಬಂಧಿಸಿ ಸ್ಥಳೀಯವಾಗಿ ಪಾಸ್ ನೀಡುವ ವಿಚಾರವನ್ನು ಶಾಸಕರು ಕೂಡ ಪ್ರಸ್ತಾಪಿಸಿದ್ದಾರೆ. ತಹಶೀಲ್ದಾರ್ ಕೂಡ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಸಂಭ್ರಮ:
ವಿಶೇಷವಾಗಿ ದೇವಿಯ ಮೂರ್ತಿ ಇಟ್ಟು ಸಿಂಗರಿಸಿ ಬಾಗಿನವನ್ನು ನೀರಿನಲ್ಲಿ ತೇಲಿ ಬಿಡುತ್ತಿದ್ದಂತೆ ನೆರದವರಲ್ಲಿ ಸಂಭ್ರಮ ಮನೆಮಾಡಿತು. ಕರಿಮನೆ ಮಹಿಳೆಯರು, ತಾಲೂಕು ನೌಕರರು ವಿಶೇಷವಾಗಿ ಭಾಗವಹಿಸಿದ್ದರು.

ಆಕರ್ಷಕವಾಗಿ ಸಿದ್ದ ಪಡಿಸಿದ ಬಾಗಿನದ ಚಿತ್ತಾರ

ಕರಿಮನೆ ಗ್ರಾಪಂ ಅಧ್ಯಕ್ಷೆ ದೇವಮ್ಮ ಗೋಪಾಲ್, ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ, ಕರವಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ, ಕೆಪಿಸಿ ಅಧಿಕಾರಿಗಳಾದ ಓಂಕಾರಪ್ಪ, ಹೊಂಬೇಗೌಡ್ರು, ಬಿಇಒ ಕೃಷ್ಣಮೂರ್ತಿ,‌ ರತ್ನಾಕರಗೌಡ, ಪೀಕಾರ್ಡ್ ಬ್ಯಾಂಕ್ ನಿರ್ದೇಶಕ ಸತೀಶ್ ಪಟೇಲ್, ಶಾಸಕ ಬೇಳೂರು ಆಪ್ತ ಸಹಾಯಕ ಸಣ್ಣಕ್ಕಿ ಮಂಜು, ದೇವೇಂದ್ರ ನಾಯ್ಕ, ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ವಿಶೇಷವಾಗಿ ಮಹಿಳಾ ಸಿಬ್ಬಂದಿಗಳು, ಗ್ರಾಪಂ ಸದಸ್ಯರು, ಸಿಬ್ಬಂದಿಗಳು ಭಾಗವಹಿಸಿದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *