Home

ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ರವಿ ಬಿದನೂರು

ಹೊಸನಗರ :ತಾಲೂಕು ವಿಜಯವಾಣಿ ಪತ್ರಿಕೆ ವರದಿಗಾರರಾದ ರವಿ ಬಿದನೂರು ಕೆಯುಡಬ್ಲೂಜೆ ಕೊಡಮಾಡುವ ರಾಜ್ಯ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಕೆಯುಡಬ್ಲೂಜೆ ವಾರ್ಷಿಕ ಪ್ರಶಸ್ತಿ ಘೋಷಣೆಯಾಗಿದ್ದು, ಗ್ರಾಮೀಣ ಜನ ಜೀವನದ ಕುರಿತ ಅತ್ಯುತ್ತಮ ವರದಿಗಾಗಿ ರವಿಯವರಿಗೆ ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ ಲಭಿಸಿದೆ.ತುಮಕೂರಿನಲ್ಲಿ ಜನವರಿ 18 ಮತ್ತು 19ರಂದು ನಡೆಯುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ನಾಡಿಗೆ ಬೆಳಕು ಕೊಟ್ಟು ಕತ್ತಲಿನಲ್ಲಿ ಬಾಳು ಸಾಗಿಸುತ್ತಿರುವ, ಮೂಲಭೂತ ಸೌಕರ್ಯ ವಂಚಿತ ಕುಗ್ರಾಮಗಳ ಕುರಿತು ವಿಶೇಷ ಕಾಳಜಿಯಿಂದ ವರದಿ ಮಾಡಿ ಆಡಳಿತದ ಗಮನಕ್ಕೆ ತರುವಲ್ಲಿ ಯಶಸ್ವಿಯಾಗಿರುವ ಬಿದನೂರುರಿಗೆ ಹಿಂದೆ2011ರಲ್ಲಿ ನವದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜ್ಯೋತಿ ಬಾ ಪುಲೆ ಫೆಲೋಶಿಪ್ ಅವಾರ್ಡ್, 2017ರಲ್ಲಿ ರಾಜ್ಯಸರ್ಕಾರ ಕೊಡಮಾಡುವ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಅರ್ಹವಾಗಿಯೇ ಸಂದಿತ್ತು.
ಜನಪರ ಕಾಳಜಿಯ, ಜನರ ಸಮಸ್ಯೆಗೆ ಧ್ವನಿಯಾಗುವ ರವಿಯವರ ವೃತ್ತಿಧರ್ಮಕ್ಕೆ ಪತ್ರಿಕೆ ವಿಶೇಷ ಅಭಿನಂದನೆ ಸಲ್ಲಿಸುತ್ತದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *