Homeತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿರಾಜ್ಯ

ಶಿವಮೊಗ್ಗ ಜಿಲ್ಲಾ ನೂತನ ರಕ್ಷಣಾಧಿಕಾರಿಗಳಾಗಿ ಬಿ.ನಿಖಿಲ್ ಅಧಿಕಾರ ಸ್ವೀಕಾರ: ಅಧಿಕಾರ ವಹಿಸಿಕೊಂಡ ಮೇಲೆ ಕೊಟ್ಟ ಮೊದಲ‌ ಸೂಚನೆ ಏನು?

ಶಿವಮೊಗ್ಗ ಜಿಲ್ಲಾ ನೂತನ ರಕ್ಷಣಾಧಿಕಾರಿಗಳಾಗಿ ಬಿ.ನಿಖಿಲ್ ಅಧಿಕಾರ ಸ್ವೀಕಾರ: ಅಧಿಕಾರ ವಹಿಸಿಕೊಂಡ ಮೇಲೆ ಕೊಟ್ಟ ಮೊದಲ‌ ಸೂಚನೆ ಏನು?

ಶಿವಮೊಗ್ಗ: ಜಿಲ್ಲೆಯ ನೂತನ ರಕ್ಷಣಾಧಿಕಾರಿಯಾಗಿ ಬಿ.ನಿಖಿಲ್‌ (Nikhil IPS) ಗುರುವಾರ ಸಂಜೆ ಅಧಿಕಾರ ಸ್ವೀಕರಿಸಿದರು.

ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ಅವರು ಬಿ.ನಿಖಿಲ್‌ ಅವರಿಗೆ ಅಧಿಕಾರ ವಹಿಸಿಕೊಟ್ಟರು.

ಸಂಜೆ ಶಿವಮೊಗ್ಗಕ್ಕೆ ಆಗಮನ
ಐಪಿಎಸ್‌ ಅಧಿಕಾರಿ ಬಿ.ನಿಖಿಲ್‌ ಅವರು ಇಂದು ಸಂಜೆ ಶಿವಮೊಗ್ಗಕ್ಕೆ ಆಗಮಿಸಿದರು. ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ನೂತನ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಇದೇ ವೇಳೆ ಹೆಚ್ಚುವರಿ ರಕ್ಷಣಾಧಿಕಾರಿಗಳು, ಡಿವೈಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳ ಪರಿಚಯ ಮಾಡಿಕೊಂಡರು.

ಅಧಿಕಾರ ವಹಿಸಿಕೊಂಡ ಬಳಿಕ ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ ಅವರು ಡಿವೈಎಸ್‌ಪಿಗಳು, ಇನ್ಸ್‌ಪೆಕ್ಟರ್‌ಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಶಿವಮೊಗ್ಗದಲ್ಲಿನ ಅಪರಾಧ ಪ್ರಕರಣಗಳು, ಕಾನೂನು ಸುವ್ಯವಸ್ಥೆ, ಅಕ್ರಮ ಚಟುವಟಿಕೆಗಳ ನಿಯಂತ್ರಣ ಕುರಿತು ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶಿವಮೊಗ್ಗ ರಕ್ಷಣಾಧಿಕಾರಿಯಾಗಿದ್ದ ಜಿ.ಕೆ.ಮಿಥುನ್‌ ಕುಮಾರ್‌ ಅವರು ಇಂದು ಬೆಂಗಳೂರಿನ ಈಶಾನ್ಯ ವಲಯದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಹಾಗಾಗಿ ಬೆಂಗಳೂರಿಗೆ ತೆರಳಿದ್ದಾರೆ. ಈ ಹಿನ್ನೆಲೆ ಹೆಚ್ಚುವರಿ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ ಅವರಿಗೆ ಮಿಥುನ್‌ ಕುಮಾರ್‌ ಅವರು ಅಧಿಕಾರ ಹಸ್ತಾಂತರ ಮಾಡಿದ್ದರು. ಎಎಸ್‌ಪಿ ಕಾರಿಯಪ್ಪ ಅವರು ಪ್ರಭಾರ ಎಸ್‌ಪಿಯಾಗಿ ಇಂದು ಜವಾಬ್ದಾರಿ ನಿಭಾಯಿಸಿದ್ದರು. ಹಾಗಾಗಿ ಎಎಸ್‌ಪಿ ಕಾರಿಯಪ್ಪ ಅವರು ನಿಖಿಲ್‌ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *