ತಾಲ್ಲೂಕುತೀರ್ಥಹಳ್ಳಿಸಾಗರಸೊರಬಹೊಸನಗರ

ಶಿವಮೊಗ್ಗ ಜಿಲ್ಲಾ ಪತ್ರಕರ್ತರ ಸಂಘದ ಪ್ರಶಸ್ತಿಗೆ ಭಾಜನರಾದ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ

 

ಹೊಸನಗರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕ ಕೊಡಮಾಡುವ ವಿಶೇಷ ಪ್ರಶಸ್ತಿಗೆ ಹೊಸನಗರ ತಾಲೂಕಿನ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಭಾಜನರಾಗಿದ್ದಾರೆ.

ಚುಟುಕು, ಹನಿಗವನ ರಚನೆ ಮೂಲಕ ವಿದ್ಯಾರ್ಥಿ ದಿಸೆಯಲ್ಲೇ ಸಾಹಿತ್ಯ ಆಸಕ್ತಿ ಹೊಂದಿದ್ದ ನಾರವಿ ಕನ್ನಡ ಜನಾಂತರಂಗದ ಮೂಲಕ ಪತ್ರಿಕಾ ವರದಿಗಾರರಾಗಿ ಕೆಲಸ ಆರಂಭಿಸಿದರು. ಬಳಿಕ ವಿಜಯಕರ್ನಾಟಕ, ವಿಜಯವಾಣಿಯ ಬಳಿಕ ಪ್ರಸ್ತುತ ಪ್ರಜಾವಾಣಿಯ ಹೊಸನಗರ ತಾಲೂಕು ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹೊಸನಗರ ತಾಲೂಕು ನಾಗರಕೊಡಿಗೆ ನಿವಾಸಿ ದಿ.ಎಲ್.ಜಿ.ರಾಮಸ್ವಾಮಿ ರಾವ್, ರಾಧಮ್ಮ ಇವರ ಪುತ್ರರಾದ ಇವರು ಪತ್ನಿ ಆಶಾ, ಮಗ ಎಲ್.ಆರ್.ಪ್ರಮಥ ವಶಿಷ್ಠ ಜೊತೆ ಸುಖೀ ಜೀವನ ಸಾಗಿಸುತ್ತಿದ್ದಾರೆ.

ಅ.08 ರಂದು ಶಿವಮೊಗ್ಗದಲ್ಲಿ ನಡೆಯುವ ವರ್ಣರಂಜಿತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕಾರ ನಡೆಯಲಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು ಗುಂಡಿ ತೋಡಿದ ನಿಧಿ ಚೋರರು

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು…

1 of 42

Leave A Reply

Your email address will not be published. Required fields are marked *