ಶಿವಮೊಗ್ಗ ಜಿಲ್ಲೆತಾಲ್ಲೂಕುಶಿವಮೊಗ್ಗಹೊಸನಗರ

HOSANAGARA RAIN EFFECT |ಕೋಡೂರಿನಲ್ಲಿ ಮಳೆ ಅಬ್ಬರ – ಕುಸುಗುಂಡಿಯಲ್ಲಿ ಪಿಕಪ್‌ ಚಾನೆಲ್‌ ಒಡೆದು ಜಮೀನಿಗೆ ಹಾನಿ – ಕಾರಕ್ಕಿಯಲ್ಲಿ ಮನೆ ಮೇಲೆ ತೆಂಗಿನ ಮರ ಬಿದ್ದು ಅಪಾರ ನಷ್ಟ

HOSANAGARA RAIN EFFECT |ಕೋಡೂರಿನಲ್ಲಿ ಮಳೆ ಅಬ್ಬರ – ಕುಸುಗುಂಡಿಯಲ್ಲಿ ಪಿಕಪ್‌ ಚಾನೆಲ್‌ ಒಡೆದು ಜಮೀನಿಗೆ ಹಾನಿ – ಕಾರಕ್ಕಿಯಲ್ಲಿ ಮನೆ ಮೇಲೆ ತೆಂಗಿನ ಮರ ಬಿದ್ದು ಅಪಾರ ನಷ್ಟ

ಕೋಡೂರು: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್‌ ಚಾನೆಲ್‌‌ ಒಡೆದು ನೀರು ಸುತ್ತಮುತ್ತಲಿನ ಕೃಷಿ ಜಮೀನಿಗೆ ನುಗ್ಗಿದ ಪರಿಣಾಮವಾಗಿ ಅಪಾರ ನಷ್ಟ ಸಂಭವಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತಿ ಆಡಳಿತ ವರ್ಗ ಜೆಸಿಬಿ ಯಂತ್ರ ಬಳಸಿ, ತಾತ್ಕಾಲಿಕವಾಗಿ ಚಾನೆಲ್‌ ದುರಸ್ತಿ ಕಾರ್ಯ ಕೈಗೊಂಡಿದೆ.
ಇದೇ ಪಂಚಾಯತಿ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ.


ಇನ್ನು ಇಲ್ಲಿನ ಕಾರಕ್ಕಿ ಗ್ರಾಮದ ಆರಗೋಡಿ ನಾಗರಾಜ‌ ಎಂಬುವರ ಮನೆ ಮೇಲೆ ಇಂದು ಮಧ್ಯಾಹ್ನ ತೆಂಗಿನ ಮರ ಬಿದ್ದು ಮನೆಯ ಮೇಲ್ಚಾವಣಿ ಸಂಪೂರ್ಣ ಹಾನಿಗೊಳಗಾಗಿದೆ. ಭಾರೀ ಮಳೆ ಮತ್ತು ಗಾಳಿಯ ಪರಿಣಾಮವಾಗಿ ಮನೆಯ ಸಮೀಪವೇ ಇದ್ದ ತೆಂಗಿನಮರ ಬುಡ ಸಹಿತ ಮನೆ ಮೇಲೆ ಬಿದ್ದು ಸಾವಿರಾರು ರೂಪಾಯಿ ನಷ್ಟವಾಗಿದ್ದು, ಮನೆಯ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ.


ಸ್ಥಳಕ್ಕೆ ಕೋಡೂರು ಗ್ರಾಮ ಪಂಚಾಯ್ತಿಯ ಪಿಡಿಓ ಮತ್ತು ಪಂಚಾಯ್ತಿ ಸದಸ್ಯರು ಭೇಟಿ ಕೊಟ್ಟು ಸೂಕ್ತ ಕ್ರಮಕ್ಕೆ ಮುಂದಾಗಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಮಲ್ಲಂದೂರು ಮೀಸಲು ಅರಣ್ಯ ಒತ್ತುವರಿ ತೆರವು : ಡಿಸಿಎಫ್ ಮೋಹನ್ ಕುಮಾರ್ ನೇತೃತ್ವದಲ್ಲಿ‌ 6.24 ಎಕರೆ ತೆರವು!

ಮಲ್ಲಂದೂರು ಮೀಸಲು ಅರಣ್ಯ ಒತ್ತುವರಿ ತೆರವು : ಡಿಸಿಎಫ್ ಮೋಹನ್ ಕುಮಾರ್ ನೇತೃತ್ವದಲ್ಲಿ‌ 6.24…

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *