ಶಿವಮೊಗ್ಗ ಜಿಲ್ಲೆತಾಲ್ಲೂಕುತೀರ್ಥಹಳ್ಳಿಶಿವಮೊಗ್ಗಸಾಗರಹೊಸನಗರ

ಕನ್ಯಾಕುಮಾರಿ ಕರಾಟೆ ಸ್ಪರ್ಧೆಯಲ್ಲಿ ಆಕಾಶ್ ಶೆಟ್ಟಿ, ನಿಧಿ, ಸುಧನ್ವ, ಸಾಧನೆ

ಕನ್ಯಾಕುಮಾರಿ ಕರಾಟೆ ಸ್ಪರ್ಧೆಯಲ್ಲಿ ಆಕಾಶ್ ಶೆಟ್ಟಿ, ನಿಧಿ, ಸುಧನ್ವ, ಸಾಧನೆ

ಹೊಸನಗರ: ಕನ್ಯಾಕುಮಾರಿಯಲ್ಲಿ ನಡೆದ ರಾಷ್ಟ್ರೀಯ ಅಂತರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ ವಿವಿಧ ವಿಭಾಗದಲ್ಲಿ ನಗರ ಶ್ರೀಧರಪುರದ ಆಕಾಶ ಶೆಟ್ಟಿ, ಹೊಸನಗರ ಹೋಲಿ ರಿಡೀಮರ್ ಶಾಲೆಯ ನಿಧಿ, ನಗರ ಅಮೃತ ವಿದ್ಯಾಲಯದ ಸುಧನ್ವ ಜೆ.ಗೌಡ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.

ಶ್ರೀಧರಪುರದ ಸದಾಶಿವ ಶೆಟ್ಟಿ ಇವರ ಪುತ್ರ ಆಕಾಶ್ ಶೆಟ್ಟಿ ಕರಾಟೆ ಫೈಟ್ ವಿಭಾಗದಲ್ಲಿ ಪ್ರಥಮ, ಕಟ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು.

ಅಂತರರಾಜ್ಯ ವಿಭಾಗದಲ್ಲಿ ನಗರ ಪ್ರೌಢಶಾಲೆಯ ದೈಹಿಕ ಶಿಕ್ಷಕ ಜಗನ್ನಾಥ ಇವರ ಪುತ್ರ, ಅಮೃತ ವಿದ್ಯಾಶಾಲೆಯ ವಿದ್ಯಾರ್ಥಿ ಸುಧನ್ವ ಜೆ.ಗೌಡ ಕಟ ವಿಭಾಗದಲ್ಲಿ ಪ್ರಥಮ, ಫೈಟ್ ವಿಭಾಗದಲ್ಲಿ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ರಾಷ್ಟ್ರೀಯ ವಿಭಾಗದ ಕರಾಟೆಯಲ್ಲಿ ಹೊಸನಗರ ಹೋಲಿ ರಿಡೀಮರ್ ಶಾಲೆಯ ನಿಧಿ ಕಟ ವಿಭಾಗದಲ್ಲಿ ದ್ವಿತೀಯ, ಫೈಟ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಅತ್ಯುತ್ತಮ ಸಾಧನೆ ಮೂಲಕ ನಗರ, ಹೊಸನಗರ ತಾಲೂಕಿಗೆ ಕೀರ್ತಿ ತಂದ ಸಾಧಕರನ್ನು ಕರಾಟೆ ತರಭೇತುದಾರ ರಾಘವೇಂದ್ರ ಜೆ.ಕೆ.ಅಭಿನಂದಿಸಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ ಸಿನಿಮಾಕ್ಕೆ ಜೂರಿ ಅವಾರ್ಡ್|

ಬೆಂಗಳೂರು ಸಿನಿ ಉತ್ಸವದಲ್ಲಿ ಮಲೆನಾಡಿನ ಕಲರವ | ಗಾರ್ಗಿ ಕಾರೇಹಕ್ಲು ನಿರ್ದೇಶನದ ಹಕ್ಕಿಗಾಗಿ…

1 of 51

Leave A Reply

Your email address will not be published. Required fields are marked *