ಕ್ರೈಂತೀರ್ಥಹಳ್ಳಿಶಿವಮೊಗ್ಗ ಜಿಲ್ಲೆ

THIRTHAHALLI| ಅಡಿಕೆ ಕಳ್ಳತನ ಮಾಡಿದ ಆರೋಪದ ಮೇಲೆ ನಾಲ್ವರ ಬಂಧನ!

THIRTHAHALLI| ಅಡಿಕೆ ಕಳ್ಳತನ ಮಾಡಿದ ಆರೋಪದ ಮೇಲೆ ನಾಲ್ವರ ಬಂಧನ!

ತೀರ್ಥಹಳ್ಳಿ : ಕಲ್ಲುಕೊಪ್ಪ ಕರಕುಚ್ಚಿ ಗ್ರಾಮದ ದೇವದಾಸ್ ಎಂಬುವರ ಮನೆಯಲ್ಲಿ 4 ಕ್ವಿಂಟಾಲ್ ಚಾಲಿ ಅಡಿಕೆ ಕಳ್ಳತನ ಮಾಡಿದ ಆರೋಪದ ಮೇಲೆ  4 ಜನರನ್ನು ವಾಹನ ಹಾಗೂ ಮಾಲು ಸಮೇತ ಮಾಳೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಮಾಳೂರು ವ್ಯಾಪ್ತಿಯಲ್ಲಿ ಕಳ್ಳತನ ನೆಡೆದ ಪ್ರಕರಣವನ್ನು ಬೆನ್ನತ್ತಿದ ಪೊಲೀಸರ ತಂಡ ಆರೋಪಿಗಳನ್ನು ಮಾಲು‌ ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಗಳಿಂದ ಅಂದಾಜು 80 ಸಾವಿರ ಮೌಲ್ಯದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ 3 ಲಕ್ಷ ರೂ ವೆಚ್ಚದ ಬೊಲೆರೋ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಶಿಕಾರಿಪುರ ಮೂಲದ
ಹನುಮಂತ, ಅಭಿಷೇಕ್ ಹಾಗೂ ತುಕಾರಾಜ್ ಎಂಬುವರನ್ನು ಬಂಧಿಸಲಾಗಿದೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *