ಕ್ರೈಂತಾಲ್ಲೂಕುಪ್ರಮುಖ ಸುದ್ದಿಶಿವಮೊಗ್ಗಶಿವಮೊಗ್ಗ ಜಿಲ್ಲೆಹೊಸನಗರ

ಎರಡು ಮಕ್ಕಳೊಂದಿಗೆ ಬಾವಿಗೆ ಬಿದ್ದು ಮಹಿಳೆ ಆತ್ಮಹತ್ಯೆ: ಮತ್ತಿಕೈಯಲ್ಲಿ ಹೃದಯವಿದ್ರಾವಕ ಘಟನೆ | ಚಂಪಕಾಪುರದಲ್ಲಿ ಸ್ಮಶಾನ ಮೌನ

ಎರಡು ಮಕ್ಕಳೊಂದಿಗೆ ಬಾವಿಗೆ ಬಿದ್ದು ಮಹಿಳೆ ಆತ್ಮಹತ್ಯೆ: ಮತ್ತಿಕೈಯಲ್ಲಿ ಹೃದಯವಿದ್ರಾವಕ ಘಟನೆ | ಚಂಪಕಾಪುರದಲ್ಲಿ ಸ್ಮಶಾನ ಮೌನ

ಹೊಸನಗರ: ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಮಹಿಖೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ.

ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು.

ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.
ನಗರ ಠಾಣೆ ಪಿಎಸ್ಐ ರಮೇಶ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.
ಈಗಾಗಲೇ ಮೃತದೇಹವನ್ನು ಬಾವಿಯಿಂದ ಎತ್ತಲಾಗಿದ್ದು, ನಗರ ಆಸ್ಪತ್ರೆಯ ಶವಾಗಾರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದೆ.

ಇಡೀ ಗ್ರಾಮದಲ್ಲಿ ಸ್ಮಶಾನಮೌನ ಆವರಿಸಿದೆ. ಅದರಲ್ಲು ಪುಟ್ಟ ಮಕ್ಕಳು ಮೃತಪಟ್ಟ ಧಾರುಣ ಸ್ಥಿತಿ ಕರುಳು ಕಿವುಚುವಂತಾಗಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ ಎಂಬ ಒತ್ತಾಯ ಗ್ರಾಮಸ್ಥರದ್ದಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *