ಶಿವಮೊಗ್ಗ ಜಿಲ್ಲೆಉಡುಪಿತಾಲ್ಲೂಕುತೀರ್ಥಹಳ್ಳಿಶಿವಮೊಗ್ಗಸಾಗರ

HOSANAGAR| ಮುಂಡಳ್ಳಿ ಸಮೀಪ ರಸ್ತೆಗೆ ಅಡ್ಡಲಾಗಿ‌ ಬಿದ್ದ ಬೃಹತ್ ಮರ | ಬೆಳಗ್ಗಿನ ಜಾವ 4 ಗಂಟೆ ಕಾಲ ಸಂಚಾರ ಬಂದ್

  • HOSANAGAR| ಮುಂಡಳ್ಳಿ ಸಮೀಪ ರಸ್ತೆಗೆ ಅಡ್ಡಲಾಗಿ‌ ಬಿದ್ದ  ಬೃಹತ್ ಮರ | ಬೆಳಗ್ಗಿನ ಜಾವ 4 ಗಂಟೆ ಕಾಲ ಸಂಚಾರ ಬಂದ್

ಹೊಸನಗರ: ಶಿವಮೊಗ್ಗ ಹೊಸನಗರ ನಗರ ಮಾಸ್ತಿಕಟ್ಟೆ – ಕುಂದಾಪುರ ಉಡುಪಿ ಮಾರ್ಗದ ಮುಂಡಳ್ಳಿ ಸಮೀಪ ಬೃಹತ್ ಮರವೊಂದು ಬೆಳಗ್ಗಿನ ಜಾವ ರಸ್ತೆಗೆ ಅಡ್ಡಲಾಗಿ ಬಿದ್ದು 4 ಗಂಟೆ ಸಂಚಾರ ಸ್ಥಗಿತಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಈ ಭಾಗದಲ್ಲಿ ರಾತ್ರಿ ಬಾರೀ ಬಿರುಗಾಳಿ ಮಳೆ ಸುರಿದಿದ್ದು ಗಾಳಿ ರಭಸಕ್ಕೆ ಮರ ಧರಾಶಾಹಿಯಾಗಿದೆ. ಶಿವಮೊಗ್ಗ ಉಡುಪಿ‌ ನಡುವಿನ ಪ್ರಮುಖ ಮಾರ್ಗ ಇದಾಗಿದೆ. ಬೆಳಗ್ಗಿನ ಜಾವ ಆದ ಕಾರಣ ವಾಹನ ದಟ್ಟಣೆ ಅಷ್ಟಾಗಿರಲಿಲ್ಲ.

ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಭಾಗಿತ್ವದಲ್ಲಿ ಮರ ತೆರವು ಕಾರ್ಯಾಚರಣೆ ನಡೆಸಲಾಯಿತು. ಬೆಳಿಗ್ಗೆ 3 ಗಂಟೆಗೆ ಸ್ಥಗಿತಗೊಂಡಿದ್ದ ಸಂಚಾರ ಬೆ.7 ಗಂಟೆಗೆ ಮುಕ್ತವಾಯಿತು.

ಉಪವಲಯ ಅರಣ್ಯಾಧಿಕಾರಿ ಅಮೃತ್ ಮತ್ತು ಸಿಬ್ಬಂದಿವರ್ಗ, ಶಾಸಕರ ಆಪ್ತ ಸಹಾಯಕ ರಾಜೇಶ ಹಿರಿಮನೆ, ದೇವು ಕಂದ್ಲಕೊಪ್ಪ, ಕೆ.ಕೆ.ರಾಮಣ್ಣ, ಯೋಗೇಂದ್ರ ಪಡುಕೋಣೆ, ದೀಕ್ಷಿತ್ ಮುಂಡಳ್ಳಿ ಸ್ಥಳೀಯರು ಮರ ತೆರವಿಗೆ ಸಹಕರಿಸಿದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *