ತಾಲ್ಲೂಕುಹೊಸನಗರ

ಬಿದನೂರಿನಲ್ಲಿ ಕಟೀಲು ಶ್ರೀಗಣಪತಿಯ ಭವ್ಯ ಮೆರವಣಿಗೆ : ಶ್ರೀಧರಪುರ ಮುಂಡಿಗೆಗದ್ದೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಹರಕೆ ಬಯಲಾಟ


ಹೊಸನಗರ: ನಗರ ಶ್ರೀಧರಪುರದ ಮುಂಡಿಗೆಗದ್ದೆಯಲ್ಲಿ ಕಟೀಲು ಶ್ರೀದುರ್ಗಾಪರಮೇಶ್ವರಿಯ ಹರಕೆ ಯಕ್ಷಗಾನ ಬಯಲಾಟದ ಅಂಗವಾಗಿ ಬಿದನೂರು ಶ್ರೀಪಂಚಮುಖಿ ದೇಗುಲದಿಂದ ಶ್ರೀ ಗಣಪತಿಯ ಮೆರವಣಿಗೆ ವೈಭವದಿಂದ ನೆರವೇರಿತು.

ಶ್ರೀ ಪಂಚಮುಖಿ ದೇಗುಲದ ಆವರದಲ್ಲಿ ವಿಘ್ನ ವಿನಾಯಕನಿಗೆ ಪೂಜೆ ನೆರವೇರಿಸಿದ ಬಳಿಕ ಪೂರ್ಣಕುಂಭ ಸ್ವಾಗತದೊಂದಿಗೆ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಕಟೀಲು ಮೇಳದ ವ್ಯವಸ್ಥಾಪಕ ಕೃಷ್ಣಮೂರ್ತಿ ಕೈರಂಗಳ್, ಪ್ರಧಾನ ಅರ್ಚಕ ಶ್ರೀಕಾಂತ ಭಟ್, ಅರ್ಚಕ ಉಮಾಮಹೇಶ್ವರ ಭಟ್, ಶನೇಶ್ವರ ದೇವಸ್ಥಾನದ ಮುಖ್ಯಸ್ಥ ಕುಶಲ ಶೆಟ್ಟಿ, ಭುಜಂಗ ಶೆಟ್ಟಿ, ಸದಾಶಿವ ಶೆಟ್ಟಿ, ದಿವಾಕರಶೆಟ್ಟಿ, ನಾಗರಾಜ ಶಟ್ಟಿ, ವಿಜಯಕುಮಾರ ಶೆಟ್ಟಿ, ಸುರೇಶ ಶೆಟ್ಟಿ, ಅಶೋಕ ಶೆಟ್ಟಿ, ನವೀನಕುಮಾರ ಶೆಟ್ಟಿ, ಉದಯಕುಮಾರ ಶೆಟ್ಟಿ, ಮತ್ತು ಸತ್ಯನಾರಾಯಣ ಶೆಟ್ಟಿ ಕುಟುಂಬವರ್ಗ, ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *