ಕ್ರೈಂHomeತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿ

ಮನೆಗೆ ನುಗ್ಗಿ ರೂ.4.65ಲಕ್ಷದ ಚಿನ್ನಾಭರಣ ಕಳ್ಳತನ | 24 ಗಂಟೆಯೊಳಗೆ ಪ್ರಕರಣ ಬೇಧಿಸಿ ಚಿನ್ನಾಭರಣ ಸಹಿತ ಆರೋಪಿಗಳ ಬಂಧನ | ನಗರ ಪೊಲೀಸರ ಕಾರ್ಯಾಚರಣೆಗೆ ವ್ಯಾಪಕ ಪ್ರಶಂಸೆ

  • ಮನೆಗೆ ನುಗ್ಗಿ ರೂ.4.65ಲಕ್ಷದ ಚಿನ್ನಾಭರಣ ಕಳ್ಳತನ

    24 ಗಂಟೆಯೊಳಗೆ ಪ್ರಕರಣ ಬೇಧಿಸಿ ಚಿನ್ನಾಭರಣ ಸಹಿತ ಆರೋಪಿಗಳ ಬಂಧನ

  • ನಗರ ಪೊಲೀಸರ ಕಾರ್ಯಾಚರಣೆಗೆ ವ್ಯಾಪಕ ಪ್ರಶಂಸೆ

ಹೊಸನಗರ: ಮನೆಗೆ ನುಗ್ಗಿ ರೂ.4.65 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಗಳನ್ನು 24 ಗಂಟೆಯೊಳಗೆ ಆಭರಣ ಸಹಿತ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ 21, ಅಶೋಕ 24, ಗಣೇಶ 30 ಬಂಧಿತ ಆರೋಪಿಗಳು.

ನೂಲಿಗ್ಗೇರಿ ನಿವಾಸಿ ರಾಜಮ್ಮ ಮನೆಯಲ್ಲಿರದ ವೇಳೆಯನ್ಬು ಗಮನಿಸಿ ಸೋಮವಾರ ರಾತ್ರಿ ಮನೆಯ ಹಂಚು ಕಿತ್ತು ಒಳನುಗ್ಗಿದ ಕಳ್ಳರು ಬೀರುವಿನ ಬೀಗ ಒಡೆದು ಚಿನ್ನದ ಸರ, ಉಂಗುರ, ಬ್ರಾಸ್ ಲೇಟ್ ಸೇರಿದಂತೆ ರೂ.4.65 ಲಕ್ಷ ಮೌಲ್ಯದ 94 ಗ್ರಾಂ ತೂಕದ ಚಿನ್ನಾಭರಣ ದೋಚಿದ್ದರು.

ರಾಜಮ್ಮ ಮನೆಗೆ ವಾಪಾಸಾಗಿ ನೋಡುತ್ತಿದ್ದಂತೆ ಕಳ್ಳತನ ಆಗಿದ್ದು ತಿಳಿದು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಎಸ್ಪಿ ಮಿಥುನ್ ಕುಮಾರ್, ಡಿವೈಎಸ್ಪಿ ಗಜಾನನ ವಿ ಸುತಾರ, ಸಿಪಿಐ ಗುರಣ್ಣ ಎಸ್ ಹೆಬ್ಬಾಳ ಮತ್ತು ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರ ಪಿಎಸ್ಐ ರಮೇಶ್ ಪಿ.ಎಸ್ ನೇತೃತ್ವದಲ್ಲಿ ಪೊಲೀಸರ ತಂಡ ರಚಿಸಿಕೊಂಡು ಆರೋಪಿಗಳ ಪತ್ತೆಗೆ ಜಾಲ ಬೀಸಿತ್ತು.

ಪ್ರಕರಣದ ವರದಿ ದಾಖಲಾಗಿ 24 ಗಂಟೆಯೊಳಗೆ ಮೂವರು ಆರೋಪಿಗಳ‌ ಜೊತೆಗೆ ಚಿನ್ನಾಭರಣ ಮತ್ತು ಮೊಬೈಲ್ ಫೋನ್ ನ್ನು ವಶಪಡಿಸಿಕೊಂಡಿದೆ. ಆರೋಪಿಗಳನ್ನು ಗುರುವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ ಎಂ.ಜಿ, ವೆಂಕಟೇಶ್, ಪ್ರವೀಣ್ ಕುಮಾರ್, ಕಿರಣ್ ಕುಮಾರ್, ವಿಶ್ವನಾಥ್, ಶಾಂತಪ್ಪ ಭಾಗವಹಿಸಿದ್ದರು.

ಕ್ಷಿಪ್ರವಾಗಿ ಪ್ರಕರಣ ಬೇಧಿಸಿ ಚಿನ್ನಾಭರಣ ವಶಕ್ಕೆ ತೆಗೆದುಕೊಂಡ ಪೊಲೀಸರ ಕಾರ್ಯಾಚರಣೆಯನ್ನು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡಿವೈಎಸ್ಪಿ ಗಜಾನನ ವಿ ಸುತಾರ ನಗರ ಠಾಣೆಗೆ ಆಗಮಿಸಿ ಪೊಲೀಸರನ್ನು ಅಭಿನಂದಿಸಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *