ಶಿವಮೊಗ್ಗ ಜಿಲ್ಲೆಕ್ರೈಂತಾಲ್ಲೂಕುಪ್ರಮುಖ ಸುದ್ದಿಶಿವಮೊಗ್ಗಹೊಸನಗರ

Nagara Range| ಅಳಿವಿನಂಚಿನ ವನ್ಯ ಪ್ರಾಣಿ ಹಾರು ಬೆಕ್ಕಿನ ಬೇಟೆ | ಓರ್ವ ಆರೋಪಿಯ ಬಂಧನ

Nagara Range| ಅಳಿವಿನಂಚಿನ ವನ್ಯ ಪ್ರಾಣಿ ಹಾರು ಬೆಕ್ಕಿನ ಬೇಟೆ | ಓರ್ವ ಆರೋಪಿಯ ಬಂಧನ

ಹೊಸನಗರ:  ಅಧಿಕೃತ ಮಾಹಿತಿ ಮೇರೆಗೆ ಅಳಿವಿನಂಚಿನಲ್ಲಿರುವ ಅತಿ ಅಪರೂಪದ ವನ್ಯಜೀವಿ ಹಾರು ಬೆಕ್ಕಿನ ಅಕ್ರಮ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ  ನಗರ ವಲಯ ಅರಣ್ಯ ವ್ಯಾಪ್ತಿಯ ಹುಂಚಾ ಹೋಬಳಿ ಬಾಳೆಕೊಪ್ಪ ಗ್ರಾಮದಲ್ಲಿ ನಡೆದಿದೆ.

ಸರ್ವೇ ನಂಬರ್ 17 ರ ಕೃಷಿ ಜಮೀನಿನಲ್ಲಿ ಹಾರು ಬೆಕ್ಕನ್ನು ಬೇಟೆ ಮಾಡಿದ ಆರೋಪದ ಮೇಲೆ ಸತೀಶ್ ಬಿನ್ ಶೇಷನಾಯ್ಕನನ್ನು ಮಾಲು ಸಹಿತ ನಗರ ವಲಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿ ವನ್ಯಜೀವಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆಂಚಪ್ಪನವರ್ ಅವರ ಮಾರ್ಗದರ್ಶನದಲ್ಲಿ, ಹೊಸನಗರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ನಿರ್ದೇಶನದಂತೆ, ನಗರ ವಲಯ ಅರಣ್ಯಾಧಿಕಾರಿ ಸಂತೋಷ್ ಮಲ್ಲನಗೌಡ, ಉಪವಲಯ ಅರಣ್ಯಾಧಿಕಾರಿಗಳಾದ ಟಿ.ಪಿ.ನರೇಂದ್ರ ಕುಮಾರ್, ಸತೀಶ್, ಸತೀಶ್ ನಾಯಕ್, ಅಮೃತ ಸುಂಕದ್, ಗಸ್ತು ಅರಣ್ಯ ರಕ್ಷಕರಾದ ಯೋಗರಾಜ್, ಆಂಜನೇಯ, ಮನೋಜ್ ಹಾಗು ವಾಹನ ಚಾಲಕ ರಾಮು ಕಾರ್ಯಾಚರಣೆಯಲ್ಲಿ ಬಾಗಿಯಾಗಿದ್ದರು.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *