ತಾಲ್ಲೂಕುಹೊಸನಗರ

NITTUR| ಭ್ರಷ್ಟಾಚಾರದ ಆರೋಪ| ನಾಳೆ ನಿಟ್ಟೂರಿನಲ್ಲಿ ಪ್ರತಿಭಟನೆ | MLC ಡಿ.ಎಸ್.ಅರುಣ್ ಭಾಗಿ

ಇಂದು ನಿಟ್ಟೂರಿನಲ್ಲಿ ಪ್ರತಿಭಟನೆ: ಎಂಎಲ್‌ಸಿ ಡಿ.ಎಸ್.ಅರುಣ್ ಬಾಗಿ
ಹೊಸನಗರ: ನಿಟ್ಟೂರು ಗ್ರಾಪಂ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ನ.23 ರಂದು ಪಂಚಾಯ್ತಿ ಆಡಳಿತ ಮಂಡಳಿಯ ಅಕ್ರಮ ಅವ್ಯವಹಾರಗಳ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.

ಸ್ಥಳೀಯ ಗ್ರಾಪಂನಲ್ಲಿ ಯಾವುದೇ ದಾಖಲೆ ಇಲ್ಲದೆಯೂ ರೂ.30 ಲಕ್ಷ ಕೋವಿಡ್ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು. ಮಳೆಹಾನಿ ಅಂತ ದಾಖಲೆ ಸೃಷ್ಟಿಸಿ ರೂ.5 ಲಕ್ಷ ಪರಿಹಾರ ಕೊಡಿಸಲು ಯತ್ನ, ನಿಟ್ಟೂರು ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆ ಅವ್ಯವಸ್ಥೆ, ಪಂಚಾಯತ್ ನಿಯಮ ಪಾಲಿಸದೇ ಸಾಮಾನ್ಯ ಸಭೆ ನಡಾವಳಿ ತಿದ್ದುವುದು, ಸದಸ್ಯರ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಗ್ರಾಪಂ ಕಾರ್ಯಾಲಯದ ಎದುರು ನಡೆಯುವ ಪ್ರತಿಭಟನೆಗೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಭಾಗವಹಿಸಲಿದ್ದಾರೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.

VIDEO REPORT| ನಾಳೆ (ನ.23) ನಿಟ್ಟೂರಿನಲ್ಲಿ ಪ್ರತಿಭಟನೆ

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು ಗುಂಡಿ ತೋಡಿದ ನಿಧಿ ಚೋರರು

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು…

1 of 42

Leave A Reply

Your email address will not be published. Required fields are marked *