ರಾಜ್ಯHomeಉಡುಪಿತಾಲ್ಲೂಕುತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿ

ಕಂದಾಯ ನಿರೀಕ್ಷಕ, ಗ್ರಾಮಲೆಕ್ಕಿಗರು ತಾವು ಕಾರ್ಯನಿರ್ವಹಿಸುವ ಕಂದಾಯ ವೃತ್ತದಲ್ಲೇ ವಾಸವಿರುವುದು ಕಡ್ಡಾಯ | ತಪ್ಪಿದಲ್ಲಿ ಶಿಸ್ತುಕ್ರಮದ ಎಚ್ಚರಿಕೆ |

ಬೆಂಗಳೂರು: ಕಂದಾಯ ನಿರೀಕ್ಷಕರು (RI) ಗ್ರಾಮ ಲೆಕ್ಕಿಗರು (VA) ತಾವು ಕೆಲಸ ಮಾಡುವ ಕಂದಾಯ ವೃತ್ತದಲ್ಲೇ ವಾಸವಿರುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ.
ಈ ಹಿಂದೆ ಕೇಂದ್ರ ಸ್ಥಾನದಲ್ಲೇ ವಾಸವಿದ್ದು ಕಾರ್ಯನಿರ್ವಹಿಸುವಂತೆ ಸುತ್ತೋಲೆ ಹೊರಡಿಸಿದ್ದರು ಕೂಡ ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಿಗರು ಕೇಂದ್ರ ಸ್ಥಾನದಲ್ಲಿ ವಾಸವಿರದೇ, ಸಾರ್ವಜನಿಕರಿಗೆ ಕಚೇರಿ ವೇಳೆಯಲ್ಲಿ ಲಭ್ಯವಾಗುತ್ತಿಲ್ಲ.
ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಸೂಚನೆಯನ್ನು ಎಲ್ಲಾ ರಾಜಸ್ವ ನಿರೀಕ್ಷರು ಮತ್ತು ಗ್ರಾಮಲೆಕ್ಕಿಗರು ಕಟ್ಟುನಿಟ್ಟಾಗಿ ಪಾಲಿಸಬೇಕು. ತಾಲೂಕು ತಹಶೀಲ್ದಾರ್ ಗಳು ಪರಿಶೀಲಿಸಿ, ದೂರುಗಳು, ಲೋಪದೋಷಗಳು ಕಂಡುಬಂದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡತಕ್ಕದ್ದು ಎಂದು ಆದೇಶಿಸಲಾಗಿದೆ.

ರಾಜಸ್ವ ನಿರೀಕ್ಷಕರು ಮತ್ತು ಗ್ರಾಮಲೆಕ್ಕಿಗರ ಕುರಿತ ಬಂದ ದೂರನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಶೀಲಿಸಿ, ಕೇಂದ್ರ ಸ್ಥಾನದಲ್ಲಿ ವಾಸವಿರದೇ ಸಾರ್ವಜನಿಕರಿಗೆ ಕಚೇರಿ ವೇಳೆ ತೊಂದರೆ ಕಂಡು ಬಂದಲ್ಲಿ ಅಂತಹ ರಾಜಸ್ವ ನಿರೀಕ್ಷಕರು, ಗ್ರಾಮಲೆಕ್ಕಿಗರ ವಿರುದ್ಧ ಕೂಡಲೇ ಶಿಸ್ತುಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು ಗುಂಡಿ ತೋಡಿದ ನಿಧಿ ಚೋರರು

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು…

1 of 42

Leave A Reply

Your email address will not be published. Required fields are marked *