ಉಡುಪಿತಾಲ್ಲೂಕುಹೊಸನಗರ

ಕೊಲ್ಲೂರು ಪಿಯು ಕಾಲೇಜ್ NSS ವಿಶೇಷ ಶಿಬಿರ ಈ ಬಾರಿ ನಿಟ್ಟೂರಿನಲ್ಲಿ | ಸೆ.13 ರಂದು ಪೂರ್ವಭಾವಿ ಸಭೆ

ಹೊಸನಗರ/ಕೊಲ್ಲೂರು.ಸೆ.11: ಕೊಲ್ಲೂರಿನ ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಈ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ಆಯೋಜಿಸಲಾಗಿದ್ದು ಅಕ್ಟೋಬರ್ 06 ರಿಂದ 12 ರ ತನಕ ನಡೆಯಲಿದೆ.

ಈ ಸಂಬಂಧ ಪೂರ್ವಭಾವಿ ಸಭೆಯನ್ನು ನಿಟ್ಟೂರು ಗ್ರಾಪಂ ಸಮುದಾಯ ಭವನದಲ್ಲಿ ಸೆ.13 ರಂದು ಕರೆಯಲಾಗಿದೆ.
ಗ್ರಾಮೀಣ ಪ್ರದೇಶವಾದ ನಿಟ್ಟೂರಿನಲ್ಲಿ ಆಟದ ಮೈದಾನ ವಿಸ್ತರಣೆ, ರಸ್ತೆ ದುರಸ್ಥಿ, ಪರಿಸರ ಸ್ವಚ್ಚತೆ, ಸಾಮಾಜಿಕ ಅರಿವು ಮತ್ತು ಇತರ ವಿಚಾರಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುವುದು.

ಎನ್ಎಸ್ಎಸ್ ವಿಶೇಷ ಶಿಬಿರ ಯಶಸ್ವಿ ಮಾಡುವ ಸಂಬಂಧ ಪೂರ್ವಭಾವಿ ಸಭೆಯಲ್ಲಿ ರೂಪುರೇಷೆ ಸಿದ್ದಪಡಿಸಲು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಶ್ರೀ ಮೂಕಾಂಬಿಕ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಅರುಣ ಪ್ರಕಾಶ್ ಕೊಲ್ಲೂರು ಮನವಿ ಮಾಡಿದ್ದಾರೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌ ಗ್ರಾಮದಲ್ಲಿ ಘಟನೆ

ಅಡಿಕೆ ಔಷಧಿ ಹೊಡೆಯುವ ವೇಳೆ ಮರದಿಂದ ಬಿದ್ದ ವ್ಯಕ್ತಿ ಸಾ*ವು!  ಕರಿಮನೆ ಗ್ರಾಪಂ ಕಿಳಂದೂರು‌…

1 of 48

Leave A Reply

Your email address will not be published. Required fields are marked *