ಶಿವಮೊಗ್ಗತೀರ್ಥಹಳ್ಳಿಪ್ರಮುಖ ಸುದ್ದಿಭದ್ರಾವತಿರಾಜ್ಯಶಿಕಾರಿಪುರಶಿರಾಳಕೊಪ್ಪ

ಪವರ್ ಲಿಫ್ಟಿಂಗ್ ನಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ | ಉಂಬ್ಳೇಬೈಲು ಅರಣ್ಯ ರಕ್ಷಕನ ಸಾಧನೆ

  • ಪವರ್ ಲಿಫ್ಟಿಂಗ್ ನಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ | ಉಂಬ್ಳೇಬೈಲು ಅರಣ್ಯ ರಕ್ಷಕನ ಸಾಧನೆ

ಶಿವಮೊಗ್ಗ: ಕರ್ನಾಡಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೌಕರರಿಗಾಗಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಉಂಬ್ಳೇಬೈಲು ಅರಣ್ಯ ವಲಯದ ಅರಣ್ಯ ರಕ್ಷಕ ಮಾಲತೇಶ ಸೂರ್ಯವಂಶಿ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ತುಮಕೂರು ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.

ಪವರ್ ಲಿಫ್ಟಿಂಗ್ 120 ಕೆ.ಜಿ. ವಿಭಾಗದ ಸ್ಪರ್ಧಾ ವಿಭಾಗದಲ್ಲಿ ಮಾಲತೇಶ ಸೂರ್ಯವಂಶಿ ಈ ಸಾಧನೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಮತ್ತು ಉಂಬ್ಳೇಬೈಲು ಅರಣ್ಯ ವಲಯಕ್ಕೆ ಕೀರ್ತಿ ತಂದ ಮಾಲತೇಶ ಸೂರ್ಯವಂಶಿ ಸಾಧನೆಯನ್ನು ಉಂಬ್ಳೇಬೈಲು ವಲಯ ಅರಣ್ಯಾಧಿಕಾರಿ ತೇಜ್, ಉಪವಲಯ ಅರಣ್ಯಾಧಿಕಾರಿಗಳಾದ ಅಬ್ದುಲ ಕರೀಮ್, ಚಂದ್ರಶೇಖರ್, ಅರುಣಕುಮಾರ್, ಗಿಡ್ಡಸ್ವಾಮಿ, ನವೀನ್, ಪವನ್, ಅರಣ್ಯ ರಕ್ಷಕ ಸುನೀಲ್, ಶ್ರೀಕಾಂತ್, ಸಂಜು, ರಿಯಾಜ್, ಸಂತೋಷ್ ಅಭಿನಂದಿಸಿದ್ದಾರೆ

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು ಗುಂಡಿ ತೋಡಿದ ನಿಧಿ ಚೋರರು

ಕೊಲ್ಲೂರು ಹೆದ್ದಾರಿ ಎಬಗೋಡು ಪಕ್ಕದಲ್ಲೇ ನಿಧಿ ಶೋಧನೆ : ಶಿವಲಿಂಗದ ಪಕ್ಕದಲ್ಲಿ 4 ಅಡಿಯಷ್ಟು…

1 of 42

Leave A Reply

Your email address will not be published. Required fields are marked *