ರಾಜ್ಯHomeಪ್ರಮುಖ ಸುದ್ದಿ

ಜಿಪಂ ತಾಪಂ ಚುನಾವಣೆ ನಡೆಸಲು 4 ವಾರಗಳಲ್ಲಿ ಮರುವಿಂಗಡಣೆ, ಸ್ಥಾನಗಳ ಮೀಸಲಾತಿ ಅಂತಿಮಗೊಳಿಸಲು ಹೈಕೋರ್ಟ್ ಸೂಚನೆ

  • ಜಿಪಂ ತಾಪಂ ಚುನಾವಣೆ ನಡೆಸಲು 4 ವಾರಗಳಲ್ಲಿ ಮರುವಿಂಗಡಣೆ, ಸ್ಥಾನಗಳ ಮೀಸಲಾತಿ ಅಂತಿಮಗೊಳಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಸಲು ಅನುಕೂಲವಾಗುವಂತೆ ನಾಲ್ಕು ವಾರಗಳಲ್ಲಿ ಕ್ಷೇತ್ರಗಳ ಮರುವಿಂಗಡಣೆ ಮತ್ತು ಮೀಸಲಾತಿಯನ್ನು ಅಂತಿಮಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಗುರುವಾರ  ಸರ್ಕಾರಕ್ಕೆ ಸೂಚಿಸಿದೆ.

ತಾ.ಪಂ ಮತ್ತು ಜಿಪಂ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರು ಈ ಕಾರ್ಯಕ್ಕೆ ಸರ್ಕಾರಕ್ಕೆ ಹೆಚ್ಚಿನ ಸಮಯ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.

ಅದಕ್ಕೆ ಸಾಂವಿಧಾನಿಕ ಮಾರ್ಗಸೂಚಿಯಂತೆ ಚುನಾವಣೆ ನಡೆಸಬೇಕಾಗುತ್ತದೆ ಎಂದು ಪೀಠ ಉತ್ತರಿಸಿತು. ಈಗಾಗಲೇ 10 ವಾರಗಳ ಕಾಲಾವಕಾಶ ನೀಡಲಾಗಿದ್ದು, ಮರುವಿಂಗಡಣೆ ಮತ್ತು ಮೀಸಲಾತಿಯ ಕಾರ್ಯಗಳನ್ನು ನಾಲ್ಕು ವಾರಗಳಲ್ಲಿ ಪೂರ್ಣಗೊಳಿಸಬೇಕು ಎಂದು ಪೀಠ ಹೇಳಿದೆ.

ಸಮಾಜದಲ್ಲಿಯ ಸುದ್ದಿಗಳನ್ನು ಆರಿಸಿ ಮತ್ತೆ ಸಮಾಜಕ್ಕೆ ನೀಡುವ ಒಂದು ಸಣ್ಣ ಪ್ರಯತ್ನ.. ಆ ಕಾರ್ಯದಲ್ಲಿ ಖಚಿತತೆ, ವಿಶ್ವಾಸಾರ್ಹತೆ, ಸಮಸ್ಯೆಯ ಬಿಂಬ, ಬಿಂಬಿತ ಸಮಸ್ಯೆಗೆ ಪರಿಹಾರದ ಯತ್ನ.. ಆ ಯತ್ನದಲ್ಲಿ ದಕ್ಕಿದ ಒಂದಷ್ಟು ಯಶಸ್ಸು.. ಇದರಲ್ಲಿ‌ ನಿರಂತರತೆ ಕಾಯ್ದುಕೊಳ್ಳುವ ಆಶಯ.. ಅಷ್ಟೆ..

What's your reaction?

Related Posts

1 of 45

Leave A Reply

Your email address will not be published. Required fields are marked *